ಗಣರಾಜ್ಯೋತ್ಸವ ಸಂಭ್ರಮದೊಂದಿಗೆ ಎಚ್ ಎಮ್ ಎಮ್ ಮತ್ತು ವಿ ಕೆ ಆರ್. - January 26, 2022

ಗಣರಾಜ್ಯೋತ್ಸವ ಸಂಭ್ರಮದೊಂದಿಗೆ ಎಚ್ಎಮ್ ಎಮ್ ಮತ್ತು ವಿ ಕೆ ಆರ್.

 

ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಗಣರಾಜ್ಯೋತ್ಸವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕುಂದಾಪುರದ ವಕೀಲೆ ಸುಮಂಗಲ ನಾಯಕ್ ಆಗಮಿಸಿ, ಗಣರಾಜ್ಯೋತ್ಸವದಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಶಿಕ್ಷಕಿ ದಿವ್ಯ ಪ್ರೀತಿ ನಜರತ್ ಮಾತನಾಡಿ ಭಾರತೀಯರಾಗಿನಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನೆನಪಿಸಿದರು. ವಿದ್ಯಾರ್ಥಿನಿ ವಿಧಾತ್ರಿ ಮತ್ತು ತಂಡದವರುದೇಶಭಕ್ತಿ ಗೀತೆಯ ಮೂಲಕ ದೇಶಪ್ರೇಮವನ್ನು ವ್ಯಕ್ತಪಡಿಸಿದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜಗದೀಶ್ಆಚಾರ್ ಸಾಸ್ತಾನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್, ಉಪಪ್ರಾಂಶುಪಾಲೆಶುಭಾ ಕೆ ಎನ್, ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್, ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕಿ ನಕ್ಷಾಶೆಟ್ಟಿ, ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಶ್ರೀಶ ಶೆಟ್ಟಿ, ಸ್ಕೌಟ್ ಗೈಡ್ಸ್, ಎನ್.ಸಿ.ಸಿ  ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳುಉಪಸ್ಥಿತರಿದ್ದರು. ಶಿಕ್ಷಕಿ ಶಾಂತಲಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. 

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved