ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ನಲ್ಲಿ ರಸ್ತೆ ಸುರಕ್ಷತಾ ಕಾರ್ಯಾಗಾರ. - December 9, 2021

ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ನಲ್ಲಿರಸ್ತೆ ಸುರಕ್ಷತಾ ಕಾರ್ಯಾಗಾರ.

 ಕುಂದಾಪುರ ಎಜುಕೇಶನ್ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲಮಾಧ್ಯಮ ಪ್ರೌಢಶಾಲೆಗಳಲ್ಲಿ6,7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ದಿನಾಂಕ 09/12/2021 ಗುರುವಾರದಂದು ರಸ್ತೆ ಸುರಕ್ಷತಾಕಾರ್ಯಾಗಾರ ಜರುಗಿತು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಸಂಚಾರಿಪೊಲೀಸ್ ಠಾಣೆಯ ಆರಕ್ಷಕ ನವೀನ್ ಕುಮಾರ್ ಆಗಮಿಸಿ, ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆಮನವರಿಕೆ ಮಾಡಿದರು. ಸಂಸ್ಥೆಯ ಉಪಪ್ರಾಂಶುಪಾಲೆ ಶುಭಾ ಕೆ ಎನ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜಗದೀಶ್ಆಚಾರ್ ಸಾಸ್ತಾನ, ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಚಂದ್ರಶೇಖರ್ಶೆಟ್ಟಿ, ಪ್ರಾಥಮಿಕ ಶಾಲಾ ಸಂಯೋಜಕ ಶಿಕ್ಷಕರಾದ ಕವಿತಾ ಪಿ ಮತ್ತು ವೀರೇಂದ್ರ ನಾಯಕ್ ಉಪಸ್ಥಿತರಿದ್ದರು.ಪ್ರಾಥಮಿಕ ಶಾಲಾ ಶಿಕ್ಷಕಿ ಭಾಗ್ಯ ಸ್ವಾಗತಿಸಿ, ವಂದಿಸಿದರು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved