ಎಚ್.ಎಮ್.ಎಮ್ ಶಿಕ್ಷಕ - ರಕ್ಷಕ ಸಭೆ - June 24, 2022

ಎಚ್.ಎಮ್.ಎಮ್ ಶಿಕ್ಷಕ - ರಕ್ಷಕ ಸಭೆ

ಕುಂದಾಪುರ : ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ೨೪/೦೬/೨೦೨೨ ಶುಕ್ರವಾರದಂದು ಈ ಶೈಕ್ಷಣಿಕ ವರ್ಷದ ಮೊದಲ ಶಿಕ್ಷಕ - ರಕ್ಷಕ ಸಭೆ, ‘ವಿ ಕೇರ್- ೨೦೨೨’ ಜರುಗಿತು. 

 ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್, ಮಗುವಿನ ಮನಸ್ಸನ್ನು ಅರ್ಥೈಸಿಕೊಂಡು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾಗಿ ಮಕ್ಕಳನ್ನು ಮಕ್ಕಳಂತೆ ಬೆಳೆಯಲು ಅವಕಾಶ ಕಲ್ಪಿಸಬೇಕು. ನಾವು ಮಗುವಿನಲ್ಲಿ ನಿರೀಕ್ಷಿಸುವ ಬದಲಾವಣೆಗಳನ್ನು ಮೊದಲಿಗೆ ನಮ್ಮಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿರೀಕ್ಷಿತ ಫಲಿತಾಂಶ ಸಾಧ್ಯ ಎಂದು ಸಭೆಯನ್ನು ಉದ್ದೇಶಿಸಿ ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ ಶಾಲೆಯ ಗುರಿ, ಉದ್ದೇಶ ಹಾಗೂ ಪೂರ್ಣ ಶೈಕ್ಷಣಿಕ ವರ್ಷದಲ್ಲಿ ಹಮ್ಮಿಕೊಂಡಿರುವ ಯೋಜನೆ ಮತ್ತು ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ವಿದ್ಯಾರ್ಥಿಗಳು ಮತ್ತು ಪೋಷಕರು ಕೈಗೊಳ್ಳಬೇಕಾದ ಕ್ರಮ ಮತ್ತು ಪಾಲಿಸಬೇಕಾದ ನಿಯಮಗಳ ಪರಿಚಯ ಮಾಡಿದರು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved