ಎಚ್. ಎಮ್. ಎಮ್, ವಿ.ಕೆ. ಆರ್ ನಲ್ಲಿ ಸ್ವಾತಂತ್ರ್ಯೋತ್ಸವ - August 15, 2023

ಕುಂದಾಪುರ : ಶ್ರೀಬಿ. ಎಮ್ ಸುಕುಮಾರ ಶೆಟ್ಟಿಯವರ ನೇತೃತ್ವದ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್‌ಆಂಗ್ಲ ಮಾಧ್ಯಮ ಪ್ರಾಥಮಿಕಮತ್ತು ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 77ನೇ ಸ್ವಾತಂತ್ರ್ಯೋತ್ಸವ ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರುವ ಪ್ರೌಢಶಾಲಾ  ಶಿಕ್ಷಕ  ಕೆ.ಪರಮೇಶ್ವರ ಉಡುಪ ಧ್ವಜಾರೋಹಣಗೈದು, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ  ಮಹತ್ವವನ್ನುಅರುಹಿದರು. ಕಾರ್ಯಕ್ರಮದ ಅಧ್ಯಕ್ಷರೂ, ಸಂಸ್ಥೆಯ ಪ್ರಾಂಶುಪಾಲರೂ ಆದಂತಹ ಡಾ. ಚಿಂತನಾ ರಾಜೇಶ್ ರವರು ವಿದ್ಯಾರ್ಥಿಗಳಿಗೆ ಶುಭಾಶಯಗೈದು ಮಾತನಾಡಿ, ದೇಶವೇ ನಮ್ಮೆಲ್ಲರ ಮೊದಲ ಆದ್ಯತೆಯಾಗಬೇಕು ಎಂದರು. ಶಾಲೆಯ ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ ಮತ್ತು ವಿದ್ಯಾರ್ಥಿಗಳಬ್ಯಾಂಡ್ ಸೆಟ್ ತಂಡಗಳ ಪ್ರದರ್ಶನ ಆಕರ್ಷಣೀಯವಾಗಿತ್ತು.‌ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯ ಶಿಕ್ಷಕರು, ಎಲ್ಲಾ ಬೋಧಕ - ಬೋಧಕೇತರ  ವರ್ಗದವರುಮತ್ತು  ವಿದ್ಯಾರ್ಥಿಗಳುಉಪಸ್ಥಿತರಿದ್ದರು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved